39.6 C
ಪುತ್ತೂರು, ಬೆಳ್ತಂಗಡಿ
April 6, 2025
Uncategorized

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

.

ಶತಮಾನಗಳಿಂದ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿ ಬದುಕು ನಡೆಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷ ಕಳೆದರೂ ಇಂದಿಗೂ ರಸ್ತೆ , ವಿದ್ಯುತ್ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅರಣ್ಯ ಹಕ್ಕುಗಳ ಕಾಯ್ದೆ ಜಾರಿಯಲ್ಲಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಮಹತ್ವದ ಸಭೆಯನ್ನು ನವೆಂಬರ್ 26 ರಂದು ಕರೆದಿರುವುದು ಸ್ವಾಗತರ್ಹ. ಈ ಸಭೆಯಲ್ಲಿ ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಮೂಲಕ ಇಡೀ ದೇಶಕ್ಕೆ ರಾಜ್ಯ ಸರ್ಕಾರ ಮಾದರಿಯಾಗಬೇಕು. ಜೊತೆಗೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ಸಂಬಂಧಿಸಿದ ಸಚಿವರುಗಳು , ರಾಜ್ಯ ಮಟ್ಟದ ಅಧಿಕಾರಿಗಳು ಆದಿವಾಸಿಗಳ ಪ್ರದೇಶಕ್ಕೆ ಭೇಟಿ ನೀಡುವ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ.

ಜಯಾನಂದ ಪಿಲಿಕಲ
ಅಧ್ಯಕ್ಷರು
ಬ್ಲಾಕ್ ಕಾಂಗ್ರೆಸ್ ಸಮಿತಿ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ