23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

.

ಶತಮಾನಗಳಿಂದ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿ ಬದುಕು ನಡೆಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷ ಕಳೆದರೂ ಇಂದಿಗೂ ರಸ್ತೆ , ವಿದ್ಯುತ್ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅರಣ್ಯ ಹಕ್ಕುಗಳ ಕಾಯ್ದೆ ಜಾರಿಯಲ್ಲಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಮಹತ್ವದ ಸಭೆಯನ್ನು ನವೆಂಬರ್ 26 ರಂದು ಕರೆದಿರುವುದು ಸ್ವಾಗತರ್ಹ. ಈ ಸಭೆಯಲ್ಲಿ ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಮೂಲಕ ಇಡೀ ದೇಶಕ್ಕೆ ರಾಜ್ಯ ಸರ್ಕಾರ ಮಾದರಿಯಾಗಬೇಕು. ಜೊತೆಗೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ಸಂಬಂಧಿಸಿದ ಸಚಿವರುಗಳು , ರಾಜ್ಯ ಮಟ್ಟದ ಅಧಿಕಾರಿಗಳು ಆದಿವಾಸಿಗಳ ಪ್ರದೇಶಕ್ಕೆ ಭೇಟಿ ನೀಡುವ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ.

ಜಯಾನಂದ ಪಿಲಿಕಲ
ಅಧ್ಯಕ್ಷರು
ಬ್ಲಾಕ್ ಕಾಂಗ್ರೆಸ್ ಸಮಿತಿ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya
error: Content is protected !!