30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

.

ಶತಮಾನಗಳಿಂದ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿ ಬದುಕು ನಡೆಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷ ಕಳೆದರೂ ಇಂದಿಗೂ ರಸ್ತೆ , ವಿದ್ಯುತ್ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅರಣ್ಯ ಹಕ್ಕುಗಳ ಕಾಯ್ದೆ ಜಾರಿಯಲ್ಲಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಮಹತ್ವದ ಸಭೆಯನ್ನು ನವೆಂಬರ್ 26 ರಂದು ಕರೆದಿರುವುದು ಸ್ವಾಗತರ್ಹ. ಈ ಸಭೆಯಲ್ಲಿ ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಮೂಲಕ ಇಡೀ ದೇಶಕ್ಕೆ ರಾಜ್ಯ ಸರ್ಕಾರ ಮಾದರಿಯಾಗಬೇಕು. ಜೊತೆಗೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ಸಂಬಂಧಿಸಿದ ಸಚಿವರುಗಳು , ರಾಜ್ಯ ಮಟ್ಟದ ಅಧಿಕಾರಿಗಳು ಆದಿವಾಸಿಗಳ ಪ್ರದೇಶಕ್ಕೆ ಭೇಟಿ ನೀಡುವ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ.

ಜಯಾನಂದ ಪಿಲಿಕಲ
ಅಧ್ಯಕ್ಷರು
ಬ್ಲಾಕ್ ಕಾಂಗ್ರೆಸ್ ಸಮಿತಿ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya
error: Content is protected !!