24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಲೋಬೊ ಮೋಟಾರ್‍ಸ್‌ನ ಮಾಲಕ ರೋನಾಲ್ಡ್ ಲೋಬೊ ರವರು ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು ಹಾಗೂ ಮಕ್ಕಳಿಂದ ನಡೆದ ಆಕರ್ಷಣೇಯ ಪಥ ಸಂಚಲನದಲ್ಲಿ ಗೌರವ ರಕ್ಷೆಯನ್ನು ಸ್ವೀಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಪ್ರಾರ್ಥನೆಯ ನಂತರ ಶಾಲಾ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾದ ರೋನಾಲ್ಡ್ ಲೋಬೊ ರವರನ್ನು ಸನ್ಮಾನಿಸಲಾಯಿತು ಹಾಗೂ ಅವರು ಕ್ರೀಡಾಕೂಟಕ್ಕೆ ಶುಭಾಶಯವನ್ನು ಕೋರಿದರು. ಸಮಾರಂಭದ ಅಧ್ಯಕ್ಷರಾದ ವಂ| ಫಾ| ಅಬೆಲ್ ಲೋಬೊ ರವರು ಅಧ್ಯಕ್ಷೀಯ ಭಾಷಣದ ಮೂಲಕ ಕ್ರೀಡಾಕೂಟಕ್ಕೆ ಶುಭಕೋರಿದರು.

ನಂತರ ಮಕ್ಕಳಿಂದ ಏರೋಬಿಕ್ ನೃತ್ಯ ಪ್ರದರ್ಶಿಸಲಾಯಿತು. ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್ ಡಿ ಸೋಜ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಅನಿತಾ ಮೋನಿಸ್‌ರವರು ಉಪಸ್ಥಿತರಿದ್ದರು.

ಶ್ರೀಮತಿ ಐರಿನ್ ರೊಡ್ರಿಗಸ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಫಿಲೋಮಿನಾರವರು ಧನ್ಯವಾದವನ್ನಿತ್ತರು. ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳು ನೇರವೇರಲ್ಪಟ್ಟು ಸಮಾರೋಪ ಸಮಾರಂಭ ನಡೆದು ಕ್ರೀಡಾಕೂಟವು ಮುಕ್ತಾಯಗೊಂಡಿತು.

Related posts

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!