38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗವು “ಫ್ಯೂಚರ್ ಹೆಚ್ ಆರ್ ಲೀಡರ್ಸ್” ಎಂಬ ಐದು ದಿನಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ನ.19 ರಂದು ಜರಗಿತು.

ಕಾರ್ಯಗಾರವನ್ನು ಎಸ್. ಡಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುಮಾರ ಹೆಗ್ಡೆ ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಹೆಚ್.ಆರ್ ಸ್ಪೆಕ್ಟ್ರಮ್ ಸ್ಥಾಪಕರಾದ ಮನ್ಮಥ ‍ಹೆಚ್.ವಿ ಭಾಗಿಯಾಗಿದ್ದರು. ಎಲ್ಲ ಕಂಪನಿಗಳಲ್ಲಿ ಮನವಶಕ್ತಿ ನಿರ್ವಹಣೆ ವಿಭಿನ್ನವಾಗಿರುತ್ತವೆ ಅದರಂತೆ ನಾವು ಸಿದ್ಧವಾಗಬೇಕು. ಕೋಟಿ ಖರ್ಚು ಮಾಡಿ ಎಮ್.ಬಿ.ಬಿ.ಎಸ್ ಮಾಡುವ ಬದಲು ಹೆಚ್ ಆರ್ ಮಾಡಿ ನಮ್ಮದೇ ಸಂಸ್ಥೆಯನ್ನು ಸ್ಥಾಪಿಸಬಹುದು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರು, ಇಂತ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರೆ ಒಳ್ಳೆಯ ಪ್ರಾಯೋಗಿಕ ಜ್ಞಾನ ಸಿಗುತ್ತವೆ ಮತ್ತು ಸಮಾಜಕಾರ್ಯ ವಿಭಾಗದ ಹೆಚ್ ಆರ್ ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಾ.ವಿಶ್ವನಾಥ . ಪಿ ,ಮುಖ್ಯಸ್ಥರು ಎಸ್ ಡಿ ಎಂ ಪಿ ಜಿ ಸೆಂಟರ್ , ಹೆಚ್ ಆರ್ ಸ್ಪೆಕ್ಟ್ರಮ್ ಇದರ ತಂಡದ ಸದಸ್ಯರಾದ ಶ್ರೀಮತಿ ಸುಷ್ಮಿತಾ ಹಾಗೂ ಗಿರೀಶ್ ಉಪಸ್ಥಿ‍ತರಿದ್ದರು.
ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಇವರು ಸ್ವಾಗತಿಸಿ, ವಿದ್ಯಾರ್ಥಿನಿ ತೇಜಸ್ವಿನಿ ಇವರು ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸುವೀರ್ ಜೈನ್ ಮತ್ತು ಡಾ| ಅತುಲ್. ಎಸ್. ಸೇಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya
error: Content is protected !!