July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗವು “ಫ್ಯೂಚರ್ ಹೆಚ್ ಆರ್ ಲೀಡರ್ಸ್” ಎಂಬ ಐದು ದಿನಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ನ.19 ರಂದು ಜರಗಿತು.

ಕಾರ್ಯಗಾರವನ್ನು ಎಸ್. ಡಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುಮಾರ ಹೆಗ್ಡೆ ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಹೆಚ್.ಆರ್ ಸ್ಪೆಕ್ಟ್ರಮ್ ಸ್ಥಾಪಕರಾದ ಮನ್ಮಥ ‍ಹೆಚ್.ವಿ ಭಾಗಿಯಾಗಿದ್ದರು. ಎಲ್ಲ ಕಂಪನಿಗಳಲ್ಲಿ ಮನವಶಕ್ತಿ ನಿರ್ವಹಣೆ ವಿಭಿನ್ನವಾಗಿರುತ್ತವೆ ಅದರಂತೆ ನಾವು ಸಿದ್ಧವಾಗಬೇಕು. ಕೋಟಿ ಖರ್ಚು ಮಾಡಿ ಎಮ್.ಬಿ.ಬಿ.ಎಸ್ ಮಾಡುವ ಬದಲು ಹೆಚ್ ಆರ್ ಮಾಡಿ ನಮ್ಮದೇ ಸಂಸ್ಥೆಯನ್ನು ಸ್ಥಾಪಿಸಬಹುದು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರು, ಇಂತ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರೆ ಒಳ್ಳೆಯ ಪ್ರಾಯೋಗಿಕ ಜ್ಞಾನ ಸಿಗುತ್ತವೆ ಮತ್ತು ಸಮಾಜಕಾರ್ಯ ವಿಭಾಗದ ಹೆಚ್ ಆರ್ ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಾ.ವಿಶ್ವನಾಥ . ಪಿ ,ಮುಖ್ಯಸ್ಥರು ಎಸ್ ಡಿ ಎಂ ಪಿ ಜಿ ಸೆಂಟರ್ , ಹೆಚ್ ಆರ್ ಸ್ಪೆಕ್ಟ್ರಮ್ ಇದರ ತಂಡದ ಸದಸ್ಯರಾದ ಶ್ರೀಮತಿ ಸುಷ್ಮಿತಾ ಹಾಗೂ ಗಿರೀಶ್ ಉಪಸ್ಥಿ‍ತರಿದ್ದರು.
ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಇವರು ಸ್ವಾಗತಿಸಿ, ವಿದ್ಯಾರ್ಥಿನಿ ತೇಜಸ್ವಿನಿ ಇವರು ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸುವೀರ್ ಜೈನ್ ಮತ್ತು ಡಾ| ಅತುಲ್. ಎಸ್. ಸೇಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!