ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗವು “ಫ್ಯೂಚರ್ ಹೆಚ್ ಆರ್ ಲೀಡರ್ಸ್” ಎಂಬ ಐದು ದಿನಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ನ.19 ರಂದು ಜರಗಿತು.

ಕಾರ್ಯಗಾರವನ್ನು ಎಸ್. ಡಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುಮಾರ ಹೆಗ್ಡೆ ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಹೆಚ್.ಆರ್ ಸ್ಪೆಕ್ಟ್ರಮ್ ಸ್ಥಾಪಕರಾದ ಮನ್ಮಥ ‍ಹೆಚ್.ವಿ ಭಾಗಿಯಾಗಿದ್ದರು. ಎಲ್ಲ ಕಂಪನಿಗಳಲ್ಲಿ ಮನವಶಕ್ತಿ ನಿರ್ವಹಣೆ ವಿಭಿನ್ನವಾಗಿರುತ್ತವೆ ಅದರಂತೆ ನಾವು ಸಿದ್ಧವಾಗಬೇಕು. ಕೋಟಿ ಖರ್ಚು ಮಾಡಿ ಎಮ್.ಬಿ.ಬಿ.ಎಸ್ ಮಾಡುವ ಬದಲು ಹೆಚ್ ಆರ್ ಮಾಡಿ ನಮ್ಮದೇ ಸಂಸ್ಥೆಯನ್ನು ಸ್ಥಾಪಿಸಬಹುದು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರು, ಇಂತ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರೆ ಒಳ್ಳೆಯ ಪ್ರಾಯೋಗಿಕ ಜ್ಞಾನ ಸಿಗುತ್ತವೆ ಮತ್ತು ಸಮಾಜಕಾರ್ಯ ವಿಭಾಗದ ಹೆಚ್ ಆರ್ ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಾ.ವಿಶ್ವನಾಥ . ಪಿ ,ಮುಖ್ಯಸ್ಥರು ಎಸ್ ಡಿ ಎಂ ಪಿ ಜಿ ಸೆಂಟರ್ , ಹೆಚ್ ಆರ್ ಸ್ಪೆಕ್ಟ್ರಮ್ ಇದರ ತಂಡದ ಸದಸ್ಯರಾದ ಶ್ರೀಮತಿ ಸುಷ್ಮಿತಾ ಹಾಗೂ ಗಿರೀಶ್ ಉಪಸ್ಥಿ‍ತರಿದ್ದರು.
ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಇವರು ಸ್ವಾಗತಿಸಿ, ವಿದ್ಯಾರ್ಥಿನಿ ತೇಜಸ್ವಿನಿ ಇವರು ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸುವೀರ್ ಜೈನ್ ಮತ್ತು ಡಾ| ಅತುಲ್. ಎಸ್. ಸೇಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿಗೆ ತೃತೀಯ ಸ್ಥಾನ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya
error: Content is protected !!