July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ವೇಣೂರು: ಸ. ಕಿ. ಪ್ರಾ. ಶಾಲೆ ಕುದ್ಯಾಡಿಯಲ್ಲಿ ಇತ್ತೀಚೆಗೆ ಬಹಳ ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಕುದ್ಯಾಡಿಗುತ್ತಿನ ಪ್ರಗತಿಪರ ಕೃಷಿಕ ಉದ್ಯಮಿ ವಿಶ್ವನಾಥರು ದೀಪ ಪ್ರಜ್ವಲನ ಮಾಡುವುದರ ಮೂಲಕ ಉದ್ಘಾಟಿಸಿದರು. ನಂತರ ಶಾಲೆಯ ಎಲ್ಲಾ ಮಕ್ಕಳಿಂದ ವೈಯಕ್ತಿಕವಾಗಿ ದೀಪ ಬೆಳಗಿಸಿ, ಕೇಕ್ ಕತ್ತರಿಸಿ ಹಂಚುವ ಮೂಲಕ ಸಾಮೂಹಿಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ನಂತರ ಸ್ಮಾರ್ಟ್ ಟಿ.ವಿಯನ್ನು ಸುಲ್ಕೇರಿ ಪಂಚಾಯತ್ ನ ಉಪಾಧ್ಯಕ್ಷ ಶುಭಕರರವರು ಉದ್ಘಾಟಿಸಿದರು.

ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ವಸಂತಿ ಇವರ ಪುತ್ರ ಶರತ್ ಕೊಡುಗೆಯಾಗಿ ನೀಡಿದ ಸ್ಟೀಲ್ ಬಾಟಲಿಯನ್ನು ಮಕ್ಕಳಿಗೆ ವಿತರಿಸಲಾಯಿತು. ಅಳದಂಗಡಿ ದುರ್ಗಾ ಗ್ಯಾರೇಜ್ ಹಾಗೂ ದುರ್ಗಾ ಕಾಂಪ್ಲೆಕ್ಸ್ ಪಿಲ್ಯ ಇದರ ಮಾಲಕರಾದ ಪದ್ಮನಾಭ ಕುಲಾಲ್ ಮಕ್ಕಳಿಗೆ ಉಚಿತವಾಗಿ ಟೈ, ಬೆಲ್ಟ್, ಐಡಿ ಕಾರ್ಡ್ ವಿತರಿಸಿದರು. ಸುಲ್ಕೇರಿ ಪಂಚಾಯತ್ ಸದಸ್ಯರಾದ ಶ್ರೀಮತಿ ಯಶೋಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು.

ಶ್ರೀ ಸಾಯಿ ಬೇಕರಿ ಮಾಲಕ ಸುನಿಲ್ ಮಕ್ಕಳಿಗೆ ಉಚಿತವಾಗಿ ಕೇಕ್ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿಯ ಸಮಿತಿಯ ಅಧ್ಯಕ್ಷ ಪ್ರವೀಣ್ ರವರು ವಹಿಸಿದರು. ವೇದಿಕೆಯಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಯುವಕ ಮಂಡಲದ ಅಧ್ಯಕ್ಷ ಸದಾನಂದ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜಯಲಕ್ಷ್ಮಿ. ಉಪಸ್ಥಿತರಿದ್ದರು. ಮಕ್ಕಳು ಪ್ರಾರ್ಥಿಸಿ, ಮುಖ್ಯೋಪಾಧ್ಯಯರಾದ ನಾಗಭೂಷಣ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಮಕ್ಕಳ ಪೋಷಕರು, ಅಡುಗೆ ಸಿಬ್ಬಂದಿ ಸಹಕರಿಸಿದರು. ಶಿಕ್ಷಕಿ ಕುಮಾರಿ ರೇಖಾ ಧನ್ಯವಾದವಿತ್ತರು.

Related posts

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya
error: Content is protected !!