April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya
error: Content is protected !!