30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya
error: Content is protected !!