23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!