23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಬೆಳ್ತಂಗಡಿ : ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಗೆಜ್ಜೆಗಿರಿಯ ಅಭಿವೃದ್ಧಿಯ ಆರಂಭದ ಕಾಲದಿಂದ ಭಕ್ತಿ ಭಾವದ ಧಾರ್ಮಿಕತೆಯ ಜೊತೆ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ಮೂಡಿಸಿದ ಕ್ರಿಯಾಶೀಲ ವ್ಯಕ್ತಿತ್ವದ ರವಿ ಪೂಜಾರಿ ಚಿಲಿಂಬಿ ಶ್ರೀ ಕ್ಷೇತ್ರದಲ್ಲಿ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಕೆಲಸ ಮಾಡಿರುವ ಇವರನ್ನು ಸರ್ವಾನುಮತದಿಂದ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಆಡಳಿತ ಸಮಿತಿಯ 8ನೇ ಮಹಾಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಹೊರರಾಜ್ಯ ಹಾಗೂ ವಿದೇಶಗಳಿಂದ ಆಗಮಿಸಿದ ಸಮಾಜದ ಪ್ರಮುಖರಾದ ಆಡಳಿತ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಆಯ್ಕೆ ಮಾಡಿದರು.

Related posts

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
error: Content is protected !!