April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

ಪುತ್ತೂರು : ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ‌ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ 2024 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿಧ್ಯಾಭ್ಯಾಸದ‌ ಜೊತೆ ಜೀವನದ ಗುರಿಯನ್ನು ಸಾಧಿಸಲು ಬೇಕಾದ ಮಾನಸಿಕ ದೃಢತೆಯನ್ನು ಬೆಳೆಸಿಕೊಳ್ಳಿ. ದೇಶದ ಭವಿಷ್ಯದ ಶಕ್ತಿ ನೀವು. ಹೊಸತನದ ಚಿಂತನೆಗಳು ನಿಮ್ಮ ಮೂಲಕ ದೇಶಕ್ಕೆ ದೊರೆಯುವಂತಾಗಲಿ ಎಂದು ಹೇಳಿದರು.

ಪಂಚಭೂತಗಳಂತೆ ಸನ್ನಡತೆ, ಸದೃಢತೆ, ಸತ್ ಚಿಂತನೆ, ಸ್ವಾಭಿಮಾನ ಮತ್ತು ರಾಷ್ಟ್ರಪ್ರೇಮ ಎಂಬ ಪಂಚ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಕಾರ್ಯ ಮಾಡಬೇಕು. ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ‌ ಮನಸ್ಸುಗಳು ಒಂದಾಗಿ ದೇಶದ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದು ಕಿಶೋರ್ ಕುಮಾರ್ ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡ‌ಳಿತ ಮಂಡಳಿಯ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ವಹಿಸಿಕೊಂಡರು. ಆಡಳಿತ ಮಂಡಳಿಯ ಪ್ರಮುಖರು, ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!