22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

ಪುತ್ತೂರು : ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ‌ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ 2024 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿಧ್ಯಾಭ್ಯಾಸದ‌ ಜೊತೆ ಜೀವನದ ಗುರಿಯನ್ನು ಸಾಧಿಸಲು ಬೇಕಾದ ಮಾನಸಿಕ ದೃಢತೆಯನ್ನು ಬೆಳೆಸಿಕೊಳ್ಳಿ. ದೇಶದ ಭವಿಷ್ಯದ ಶಕ್ತಿ ನೀವು. ಹೊಸತನದ ಚಿಂತನೆಗಳು ನಿಮ್ಮ ಮೂಲಕ ದೇಶಕ್ಕೆ ದೊರೆಯುವಂತಾಗಲಿ ಎಂದು ಹೇಳಿದರು.

ಪಂಚಭೂತಗಳಂತೆ ಸನ್ನಡತೆ, ಸದೃಢತೆ, ಸತ್ ಚಿಂತನೆ, ಸ್ವಾಭಿಮಾನ ಮತ್ತು ರಾಷ್ಟ್ರಪ್ರೇಮ ಎಂಬ ಪಂಚ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಕಾರ್ಯ ಮಾಡಬೇಕು. ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ‌ ಮನಸ್ಸುಗಳು ಒಂದಾಗಿ ದೇಶದ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದು ಕಿಶೋರ್ ಕುಮಾರ್ ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡ‌ಳಿತ ಮಂಡಳಿಯ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ವಹಿಸಿಕೊಂಡರು. ಆಡಳಿತ ಮಂಡಳಿಯ ಪ್ರಮುಖರು, ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!