September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

ಪುತ್ತೂರು : ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ‌ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ 2024 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿಧ್ಯಾಭ್ಯಾಸದ‌ ಜೊತೆ ಜೀವನದ ಗುರಿಯನ್ನು ಸಾಧಿಸಲು ಬೇಕಾದ ಮಾನಸಿಕ ದೃಢತೆಯನ್ನು ಬೆಳೆಸಿಕೊಳ್ಳಿ. ದೇಶದ ಭವಿಷ್ಯದ ಶಕ್ತಿ ನೀವು. ಹೊಸತನದ ಚಿಂತನೆಗಳು ನಿಮ್ಮ ಮೂಲಕ ದೇಶಕ್ಕೆ ದೊರೆಯುವಂತಾಗಲಿ ಎಂದು ಹೇಳಿದರು.

ಪಂಚಭೂತಗಳಂತೆ ಸನ್ನಡತೆ, ಸದೃಢತೆ, ಸತ್ ಚಿಂತನೆ, ಸ್ವಾಭಿಮಾನ ಮತ್ತು ರಾಷ್ಟ್ರಪ್ರೇಮ ಎಂಬ ಪಂಚ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಕಾರ್ಯ ಮಾಡಬೇಕು. ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ‌ ಮನಸ್ಸುಗಳು ಒಂದಾಗಿ ದೇಶದ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದು ಕಿಶೋರ್ ಕುಮಾರ್ ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡ‌ಳಿತ ಮಂಡಳಿಯ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ವಹಿಸಿಕೊಂಡರು. ಆಡಳಿತ ಮಂಡಳಿಯ ಪ್ರಮುಖರು, ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya
error: Content is protected !!