22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರವರು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಆಶಾಲತ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬೆಳಾಲು ಲಕ್ಷ್ಮಣ ಗೌಡ,ಜಯಾನಂದ ಲಾಯಿಲ,ಉದಯ ಲಾಯಿಲ,ವಸಂತಿ ಟಿ ನಿಡ್ಲೆ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಲಾಯಿಲ ದಯಾ ವಿಶೇಷ ಶಾಲೆಯ ದಿವ್ಯಾ ಅವರನ್ನು ಗೌರವಿಸಿ ಸನ್ಮಾನಿಸಿದರು.

ವಿವಿಧ ಹಬ್ಬಗಳಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡಿ, ಖರೀದಿಯ ಮೇಲೆ ಲಕ್ಕಿ ಕೂಪನ್ ಡ್ರಾ ಮಾಡಲಾಯಿತು‌.ಸಂಸ್ಥೆಯ ವ್ಯವಸ್ಥಾಪಕ ಅಶೋಕ್ ಬಂಗೇರ ಸ್ವಾಗತಿಸಿ, ಸಂಸ್ಥೆಯ ಬಗ್ಗೆ ವಿವರಿಸಿದರು. ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು.

Related posts

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya
error: Content is protected !!