24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ ,ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ,ಗುಂಪು ಚಟುವಟಿಕೆ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.


‌‌‌‌‌‌‌‌‌ ಈ ಪ್ರಯುಕ್ತ ಪೂಜ್ಯ ಖಾವಂದರ ಹುಟ್ಟು ಹಬ್ಬದ ಆಚರಣೆಯ ಕಾರ್ಯಕ್ರಮದಲ್ಲಿ ವಿಪತ್ತು ನಿರ್ವಹಣಾ ತಂಡದ ಯೋಜನಾಧಿಕಾರಿಯಾದ ಕಿಶೋರ್ ಕುಮಾರ್ ಎಂ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶ್ರೀ ಧರ್ಮಸ್ಥಳ ಕ್ಷೇತ್ರ ಹಾಗೂ ಕುಟುಂಬದ ವಿಸ್ತಾರವಾದ ಪರಿಚಯವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಅಲ್ಲದೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯ ಸೌಲಭ್ಯ ಗಳ ಮಾಹಿತಿಯನ್ನು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ನಿರೂಪಣೆ ಹಾಗೂ ಧನ್ಯವಾದ ವನ್ನು ಶಿಕ್ಷಕ ರಾದ ಶ್ರೇಯಾಂಸ ಜೈನ್ , ನೆರವೇರಿಸಿಕೊಟ್ಟರು

Related posts

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya
error: Content is protected !!