25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ ,ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ,ಗುಂಪು ಚಟುವಟಿಕೆ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.


‌‌‌‌‌‌‌‌‌ ಈ ಪ್ರಯುಕ್ತ ಪೂಜ್ಯ ಖಾವಂದರ ಹುಟ್ಟು ಹಬ್ಬದ ಆಚರಣೆಯ ಕಾರ್ಯಕ್ರಮದಲ್ಲಿ ವಿಪತ್ತು ನಿರ್ವಹಣಾ ತಂಡದ ಯೋಜನಾಧಿಕಾರಿಯಾದ ಕಿಶೋರ್ ಕುಮಾರ್ ಎಂ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶ್ರೀ ಧರ್ಮಸ್ಥಳ ಕ್ಷೇತ್ರ ಹಾಗೂ ಕುಟುಂಬದ ವಿಸ್ತಾರವಾದ ಪರಿಚಯವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಅಲ್ಲದೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯ ಸೌಲಭ್ಯ ಗಳ ಮಾಹಿತಿಯನ್ನು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ನಿರೂಪಣೆ ಹಾಗೂ ಧನ್ಯವಾದ ವನ್ನು ಶಿಕ್ಷಕ ರಾದ ಶ್ರೇಯಾಂಸ ಜೈನ್ , ನೆರವೇರಿಸಿಕೊಟ್ಟರು

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!