22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

ಮೊಗ್ರು : ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ ಹೌಸ್ ನಲ್ಲಿ ಮೂರನೇ ವರ್ಷದ ಎರಡು ದಿನಗಳ ಜೇನು ಕೃಷಿ ಮಾಹಿತಿ ಶಿಬಿರ ಕಾರ್ಯಕ್ರಮದ ಉದ್ಘಾಟನೆಯು ನ.23 ರಂದು ನೆರವೇರಿತು.


ಕಡಮ್ಮಾಜೆ ಫಾರ್ಮ್ಸ್ ನ ಶ್ರೀಮತಿ ಕುಸುಮಾವತಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಸಂದರ್ಬೋಚಿತವಾಗಿ ಮಾತನಾಡಿದರು. ಜೇನು ಕೃಷಿ ತರಬೇತುದಾರರಾದ ರಾಧಾಕೃಷ್ಣ ಕೋಡಿ ಹಾಗೂ ಬೆಳ್ತಂಗಡಿ ಚಿಂತನಾ ಹನಿ ಭೀ ಫಾರ್ಮ್ ನ ಅಶೋಕ್ ಕುಮಾರ್ ಜೀ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.


ಬಂದಾರು ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು. ಅರುಣಾ ದೇವಿಪ್ರಸಾದ್ ಮತ್ತು ಅಶ್ವಿನಿ ಜಯ ಪ್ರಸಾದ್ ಪ್ರಾರ್ಥನೆ ನೆರವೇರಿಸಿದರು, ಅಶೋಕ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಜನರು ಜೇನು ಕೃಷಿಯ ಸಮರ್ಪಕ ಮಾಹಿತಿ ಪಡೆದುಕೊಂಡರು.

Related posts

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!