September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

ಮೊಗ್ರು : ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ ಹೌಸ್ ನಲ್ಲಿ ಮೂರನೇ ವರ್ಷದ ಎರಡು ದಿನಗಳ ಜೇನು ಕೃಷಿ ಮಾಹಿತಿ ಶಿಬಿರ ಕಾರ್ಯಕ್ರಮದ ಉದ್ಘಾಟನೆಯು ನ.23 ರಂದು ನೆರವೇರಿತು.


ಕಡಮ್ಮಾಜೆ ಫಾರ್ಮ್ಸ್ ನ ಶ್ರೀಮತಿ ಕುಸುಮಾವತಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಸಂದರ್ಬೋಚಿತವಾಗಿ ಮಾತನಾಡಿದರು. ಜೇನು ಕೃಷಿ ತರಬೇತುದಾರರಾದ ರಾಧಾಕೃಷ್ಣ ಕೋಡಿ ಹಾಗೂ ಬೆಳ್ತಂಗಡಿ ಚಿಂತನಾ ಹನಿ ಭೀ ಫಾರ್ಮ್ ನ ಅಶೋಕ್ ಕುಮಾರ್ ಜೀ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.


ಬಂದಾರು ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು. ಅರುಣಾ ದೇವಿಪ್ರಸಾದ್ ಮತ್ತು ಅಶ್ವಿನಿ ಜಯ ಪ್ರಸಾದ್ ಪ್ರಾರ್ಥನೆ ನೆರವೇರಿಸಿದರು, ಅಶೋಕ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಜನರು ಜೇನು ಕೃಷಿಯ ಸಮರ್ಪಕ ಮಾಹಿತಿ ಪಡೆದುಕೊಂಡರು.

Related posts

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya
error: Content is protected !!