25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಲೋಬೊ ಮೋಟಾರ್‍ಸ್‌ನ ಮಾಲಕ ರೋನಾಲ್ಡ್ ಲೋಬೊ ರವರು ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು ಹಾಗೂ ಮಕ್ಕಳಿಂದ ನಡೆದ ಆಕರ್ಷಣೇಯ ಪಥ ಸಂಚಲನದಲ್ಲಿ ಗೌರವ ರಕ್ಷೆಯನ್ನು ಸ್ವೀಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಪ್ರಾರ್ಥನೆಯ ನಂತರ ಶಾಲಾ ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾದ ರೋನಾಲ್ಡ್ ಲೋಬೊ ರವರನ್ನು ಸನ್ಮಾನಿಸಲಾಯಿತು ಹಾಗೂ ಅವರು ಕ್ರೀಡಾಕೂಟಕ್ಕೆ ಶುಭಾಶಯವನ್ನು ಕೋರಿದರು. ಸಮಾರಂಭದ ಅಧ್ಯಕ್ಷರಾದ ವಂ| ಫಾ| ಅಬೆಲ್ ಲೋಬೊ ರವರು ಅಧ್ಯಕ್ಷೀಯ ಭಾಷಣದ ಮೂಲಕ ಕ್ರೀಡಾಕೂಟಕ್ಕೆ ಶುಭಕೋರಿದರು.

ನಂತರ ಮಕ್ಕಳಿಂದ ಏರೋಬಿಕ್ ನೃತ್ಯ ಪ್ರದರ್ಶಿಸಲಾಯಿತು. ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್ ಡಿ ಸೋಜ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಅನಿತಾ ಮೋನಿಸ್‌ರವರು ಉಪಸ್ಥಿತರಿದ್ದರು.

ಶ್ರೀಮತಿ ಐರಿನ್ ರೊಡ್ರಿಗಸ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಫಿಲೋಮಿನಾರವರು ಧನ್ಯವಾದವನ್ನಿತ್ತರು. ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳು ನೇರವೇರಲ್ಪಟ್ಟು ಸಮಾರೋಪ ಸಮಾರಂಭ ನಡೆದು ಕ್ರೀಡಾಕೂಟವು ಮುಕ್ತಾಯಗೊಂಡಿತು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya
error: Content is protected !!