25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗವು “ಫ್ಯೂಚರ್ ಹೆಚ್ ಆರ್ ಲೀಡರ್ಸ್” ಎಂಬ ಐದು ದಿನಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ನ.19 ರಂದು ಜರಗಿತು.

ಕಾರ್ಯಗಾರವನ್ನು ಎಸ್. ಡಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುಮಾರ ಹೆಗ್ಡೆ ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಹೆಚ್.ಆರ್ ಸ್ಪೆಕ್ಟ್ರಮ್ ಸ್ಥಾಪಕರಾದ ಮನ್ಮಥ ‍ಹೆಚ್.ವಿ ಭಾಗಿಯಾಗಿದ್ದರು. ಎಲ್ಲ ಕಂಪನಿಗಳಲ್ಲಿ ಮನವಶಕ್ತಿ ನಿರ್ವಹಣೆ ವಿಭಿನ್ನವಾಗಿರುತ್ತವೆ ಅದರಂತೆ ನಾವು ಸಿದ್ಧವಾಗಬೇಕು. ಕೋಟಿ ಖರ್ಚು ಮಾಡಿ ಎಮ್.ಬಿ.ಬಿ.ಎಸ್ ಮಾಡುವ ಬದಲು ಹೆಚ್ ಆರ್ ಮಾಡಿ ನಮ್ಮದೇ ಸಂಸ್ಥೆಯನ್ನು ಸ್ಥಾಪಿಸಬಹುದು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರು, ಇಂತ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರೆ ಒಳ್ಳೆಯ ಪ್ರಾಯೋಗಿಕ ಜ್ಞಾನ ಸಿಗುತ್ತವೆ ಮತ್ತು ಸಮಾಜಕಾರ್ಯ ವಿಭಾಗದ ಹೆಚ್ ಆರ್ ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಾ.ವಿಶ್ವನಾಥ . ಪಿ ,ಮುಖ್ಯಸ್ಥರು ಎಸ್ ಡಿ ಎಂ ಪಿ ಜಿ ಸೆಂಟರ್ , ಹೆಚ್ ಆರ್ ಸ್ಪೆಕ್ಟ್ರಮ್ ಇದರ ತಂಡದ ಸದಸ್ಯರಾದ ಶ್ರೀಮತಿ ಸುಷ್ಮಿತಾ ಹಾಗೂ ಗಿರೀಶ್ ಉಪಸ್ಥಿ‍ತರಿದ್ದರು.
ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಇವರು ಸ್ವಾಗತಿಸಿ, ವಿದ್ಯಾರ್ಥಿನಿ ತೇಜಸ್ವಿನಿ ಇವರು ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸುವೀರ್ ಜೈನ್ ಮತ್ತು ಡಾ| ಅತುಲ್. ಎಸ್. ಸೇಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya
error: Content is protected !!