25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗವು “ಫ್ಯೂಚರ್ ಹೆಚ್ ಆರ್ ಲೀಡರ್ಸ್” ಎಂಬ ಐದು ದಿನಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ನ.19 ರಂದು ಜರಗಿತು.

ಕಾರ್ಯಗಾರವನ್ನು ಎಸ್. ಡಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುಮಾರ ಹೆಗ್ಡೆ ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಹೆಚ್.ಆರ್ ಸ್ಪೆಕ್ಟ್ರಮ್ ಸ್ಥಾಪಕರಾದ ಮನ್ಮಥ ‍ಹೆಚ್.ವಿ ಭಾಗಿಯಾಗಿದ್ದರು. ಎಲ್ಲ ಕಂಪನಿಗಳಲ್ಲಿ ಮನವಶಕ್ತಿ ನಿರ್ವಹಣೆ ವಿಭಿನ್ನವಾಗಿರುತ್ತವೆ ಅದರಂತೆ ನಾವು ಸಿದ್ಧವಾಗಬೇಕು. ಕೋಟಿ ಖರ್ಚು ಮಾಡಿ ಎಮ್.ಬಿ.ಬಿ.ಎಸ್ ಮಾಡುವ ಬದಲು ಹೆಚ್ ಆರ್ ಮಾಡಿ ನಮ್ಮದೇ ಸಂಸ್ಥೆಯನ್ನು ಸ್ಥಾಪಿಸಬಹುದು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರು, ಇಂತ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರೆ ಒಳ್ಳೆಯ ಪ್ರಾಯೋಗಿಕ ಜ್ಞಾನ ಸಿಗುತ್ತವೆ ಮತ್ತು ಸಮಾಜಕಾರ್ಯ ವಿಭಾಗದ ಹೆಚ್ ಆರ್ ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಾ.ವಿಶ್ವನಾಥ . ಪಿ ,ಮುಖ್ಯಸ್ಥರು ಎಸ್ ಡಿ ಎಂ ಪಿ ಜಿ ಸೆಂಟರ್ , ಹೆಚ್ ಆರ್ ಸ್ಪೆಕ್ಟ್ರಮ್ ಇದರ ತಂಡದ ಸದಸ್ಯರಾದ ಶ್ರೀಮತಿ ಸುಷ್ಮಿತಾ ಹಾಗೂ ಗಿರೀಶ್ ಉಪಸ್ಥಿ‍ತರಿದ್ದರು.
ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಇವರು ಸ್ವಾಗತಿಸಿ, ವಿದ್ಯಾರ್ಥಿನಿ ತೇಜಸ್ವಿನಿ ಇವರು ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸುವೀರ್ ಜೈನ್ ಮತ್ತು ಡಾ| ಅತುಲ್. ಎಸ್. ಸೇಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya
error: Content is protected !!