25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ವೇಣೂರು: ಸ. ಕಿ. ಪ್ರಾ. ಶಾಲೆ ಕುದ್ಯಾಡಿಯಲ್ಲಿ ಇತ್ತೀಚೆಗೆ ಬಹಳ ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಕುದ್ಯಾಡಿಗುತ್ತಿನ ಪ್ರಗತಿಪರ ಕೃಷಿಕ ಉದ್ಯಮಿ ವಿಶ್ವನಾಥರು ದೀಪ ಪ್ರಜ್ವಲನ ಮಾಡುವುದರ ಮೂಲಕ ಉದ್ಘಾಟಿಸಿದರು. ನಂತರ ಶಾಲೆಯ ಎಲ್ಲಾ ಮಕ್ಕಳಿಂದ ವೈಯಕ್ತಿಕವಾಗಿ ದೀಪ ಬೆಳಗಿಸಿ, ಕೇಕ್ ಕತ್ತರಿಸಿ ಹಂಚುವ ಮೂಲಕ ಸಾಮೂಹಿಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ನಂತರ ಸ್ಮಾರ್ಟ್ ಟಿ.ವಿಯನ್ನು ಸುಲ್ಕೇರಿ ಪಂಚಾಯತ್ ನ ಉಪಾಧ್ಯಕ್ಷ ಶುಭಕರರವರು ಉದ್ಘಾಟಿಸಿದರು.

ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ವಸಂತಿ ಇವರ ಪುತ್ರ ಶರತ್ ಕೊಡುಗೆಯಾಗಿ ನೀಡಿದ ಸ್ಟೀಲ್ ಬಾಟಲಿಯನ್ನು ಮಕ್ಕಳಿಗೆ ವಿತರಿಸಲಾಯಿತು. ಅಳದಂಗಡಿ ದುರ್ಗಾ ಗ್ಯಾರೇಜ್ ಹಾಗೂ ದುರ್ಗಾ ಕಾಂಪ್ಲೆಕ್ಸ್ ಪಿಲ್ಯ ಇದರ ಮಾಲಕರಾದ ಪದ್ಮನಾಭ ಕುಲಾಲ್ ಮಕ್ಕಳಿಗೆ ಉಚಿತವಾಗಿ ಟೈ, ಬೆಲ್ಟ್, ಐಡಿ ಕಾರ್ಡ್ ವಿತರಿಸಿದರು. ಸುಲ್ಕೇರಿ ಪಂಚಾಯತ್ ಸದಸ್ಯರಾದ ಶ್ರೀಮತಿ ಯಶೋಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು.

ಶ್ರೀ ಸಾಯಿ ಬೇಕರಿ ಮಾಲಕ ಸುನಿಲ್ ಮಕ್ಕಳಿಗೆ ಉಚಿತವಾಗಿ ಕೇಕ್ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿಯ ಸಮಿತಿಯ ಅಧ್ಯಕ್ಷ ಪ್ರವೀಣ್ ರವರು ವಹಿಸಿದರು. ವೇದಿಕೆಯಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಯುವಕ ಮಂಡಲದ ಅಧ್ಯಕ್ಷ ಸದಾನಂದ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜಯಲಕ್ಷ್ಮಿ. ಉಪಸ್ಥಿತರಿದ್ದರು. ಮಕ್ಕಳು ಪ್ರಾರ್ಥಿಸಿ, ಮುಖ್ಯೋಪಾಧ್ಯಯರಾದ ನಾಗಭೂಷಣ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಮಕ್ಕಳ ಪೋಷಕರು, ಅಡುಗೆ ಸಿಬ್ಬಂದಿ ಸಹಕರಿಸಿದರು. ಶಿಕ್ಷಕಿ ಕುಮಾರಿ ರೇಖಾ ಧನ್ಯವಾದವಿತ್ತರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya
error: Content is protected !!