23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya
error: Content is protected !!