July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya
error: Content is protected !!