25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!