September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ ಮಾರ್ಗದರ್ಶನದಲ್ಲಿ ಶತರುದ್ರಾಭಿಷೇಕ ಕಾರ್ಯಕ್ರಮವು ಜರಗಿತು.

ಬಳಿಕ ಭರತನಾಟ್ಯ, ಯಕ್ಷಗಾನ ಹಾಡು,ಭಜನೆ, ಚೆಂಡೆ ವಾದನ ಶಂಖವಾದನ, ವೇದಮಂತ್ರ ಘೋಷಗಳೊಂದಿಗೆ ಅಪರೂಪದ ಅಷ್ಟಾವಧಾನ ಕಾರ್ಯಕ್ರಮವು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಹೆಚ್. ವಾಸುದೇವ ರಾವ್, ಶಿವಾನಂದ ರಾವ್ ಕಕ್ಕೆನೇಜಿ, ಶ್ರೀಮತಿ ನಾಗರತ್ನ ಕೊಲ್ಲಿಪಾಲು, ಪುರೋಹಿತ ವರ್ಗದವರು ಉಪಸ್ಥಿತರಿದ್ದರು. ಶ್ರೀ ವಾಗೀಶ ಶಾಸ್ತ್ರಿಗಳು ಧಾರ್ಮಿಕ ಪ್ರವಚನ ಮಾಡುತ್ತಾ ರುದ್ರಾಭಿಷೇಕ, ರುದ್ರನ ಮಹಿಮೆಯನ್ನು ವರ್ಣಿಸಿದರು, ಮನುಷ್ಯನಿಗೆ ಎಲ್ಲಾ ಭಾಗ್ಯಗಳಿಗಿಂತಲೂ ಆರೋಗ್ಯ ಭಾಗ್ಯವೇ ಮಿಗಿಲಾದುದು, ಬದುಕಿನಲ್ಲಿ , ಬದುಕು ಮುಗಿದ ಬಳಿಕವೂ ನಮ್ಮೊಂದಿಗೆ ಸದಾ ಬರುವುದು ನಾವು ಮಾಡಿದ ಧರ್ಮ ಕಾರ್ಯಗಳು ಮಾತ್ರವೆಂದು ನುಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯೊಂದಿಗೆ ಈ ಅಪರೂಪದ ಕಾರ್ಯಕ್ರಮವು ಸಮಾಪನಗೊಂಡಿತು.

Related posts

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya
error: Content is protected !!