23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರವರು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಆಶಾಲತ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬೆಳಾಲು ಲಕ್ಷ್ಮಣ ಗೌಡ,ಜಯಾನಂದ ಲಾಯಿಲ,ಉದಯ ಲಾಯಿಲ,ವಸಂತಿ ಟಿ ನಿಡ್ಲೆ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಲಾಯಿಲ ದಯಾ ವಿಶೇಷ ಶಾಲೆಯ ದಿವ್ಯಾ ಅವರನ್ನು ಗೌರವಿಸಿ ಸನ್ಮಾನಿಸಿದರು.

ವಿವಿಧ ಹಬ್ಬಗಳಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡಿ, ಖರೀದಿಯ ಮೇಲೆ ಲಕ್ಕಿ ಕೂಪನ್ ಡ್ರಾ ಮಾಡಲಾಯಿತು‌.ಸಂಸ್ಥೆಯ ವ್ಯವಸ್ಥಾಪಕ ಅಶೋಕ್ ಬಂಗೇರ ಸ್ವಾಗತಿಸಿ, ಸಂಸ್ಥೆಯ ಬಗ್ಗೆ ವಿವರಿಸಿದರು. ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!