September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರವರು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಆಶಾಲತ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬೆಳಾಲು ಲಕ್ಷ್ಮಣ ಗೌಡ,ಜಯಾನಂದ ಲಾಯಿಲ,ಉದಯ ಲಾಯಿಲ,ವಸಂತಿ ಟಿ ನಿಡ್ಲೆ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಲಾಯಿಲ ದಯಾ ವಿಶೇಷ ಶಾಲೆಯ ದಿವ್ಯಾ ಅವರನ್ನು ಗೌರವಿಸಿ ಸನ್ಮಾನಿಸಿದರು.

ವಿವಿಧ ಹಬ್ಬಗಳಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡಿ, ಖರೀದಿಯ ಮೇಲೆ ಲಕ್ಕಿ ಕೂಪನ್ ಡ್ರಾ ಮಾಡಲಾಯಿತು‌.ಸಂಸ್ಥೆಯ ವ್ಯವಸ್ಥಾಪಕ ಅಶೋಕ್ ಬಂಗೇರ ಸ್ವಾಗತಿಸಿ, ಸಂಸ್ಥೆಯ ಬಗ್ಗೆ ವಿವರಿಸಿದರು. ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು.

Related posts

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya
error: Content is protected !!