September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

ಮೊಗ್ರು : ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ ಹೌಸ್ ನಲ್ಲಿ ಮೂರನೇ ವರ್ಷದ ಎರಡು ದಿನಗಳ ಜೇನು ಕೃಷಿ ಮಾಹಿತಿ ಶಿಬಿರ ಕಾರ್ಯಕ್ರಮದ ಉದ್ಘಾಟನೆಯು ನ.23 ರಂದು ನೆರವೇರಿತು.


ಕಡಮ್ಮಾಜೆ ಫಾರ್ಮ್ಸ್ ನ ಶ್ರೀಮತಿ ಕುಸುಮಾವತಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಸಂದರ್ಬೋಚಿತವಾಗಿ ಮಾತನಾಡಿದರು. ಜೇನು ಕೃಷಿ ತರಬೇತುದಾರರಾದ ರಾಧಾಕೃಷ್ಣ ಕೋಡಿ ಹಾಗೂ ಬೆಳ್ತಂಗಡಿ ಚಿಂತನಾ ಹನಿ ಭೀ ಫಾರ್ಮ್ ನ ಅಶೋಕ್ ಕುಮಾರ್ ಜೀ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.


ಬಂದಾರು ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು. ಅರುಣಾ ದೇವಿಪ್ರಸಾದ್ ಮತ್ತು ಅಶ್ವಿನಿ ಜಯ ಪ್ರಸಾದ್ ಪ್ರಾರ್ಥನೆ ನೆರವೇರಿಸಿದರು, ಅಶೋಕ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಜನರು ಜೇನು ಕೃಷಿಯ ಸಮರ್ಪಕ ಮಾಹಿತಿ ಪಡೆದುಕೊಂಡರು.

Related posts

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

Suddi Udaya
error: Content is protected !!