22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

ಮೊಗ್ರು : ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ ಹೌಸ್ ನಲ್ಲಿ ಮೂರನೇ ವರ್ಷದ ಎರಡು ದಿನಗಳ ಜೇನು ಕೃಷಿ ಮಾಹಿತಿ ಶಿಬಿರ ಕಾರ್ಯಕ್ರಮದ ಉದ್ಘಾಟನೆಯು ನ.23 ರಂದು ನೆರವೇರಿತು.


ಕಡಮ್ಮಾಜೆ ಫಾರ್ಮ್ಸ್ ನ ಶ್ರೀಮತಿ ಕುಸುಮಾವತಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಸಂದರ್ಬೋಚಿತವಾಗಿ ಮಾತನಾಡಿದರು. ಜೇನು ಕೃಷಿ ತರಬೇತುದಾರರಾದ ರಾಧಾಕೃಷ್ಣ ಕೋಡಿ ಹಾಗೂ ಬೆಳ್ತಂಗಡಿ ಚಿಂತನಾ ಹನಿ ಭೀ ಫಾರ್ಮ್ ನ ಅಶೋಕ್ ಕುಮಾರ್ ಜೀ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.


ಬಂದಾರು ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು. ಅರುಣಾ ದೇವಿಪ್ರಸಾದ್ ಮತ್ತು ಅಶ್ವಿನಿ ಜಯ ಪ್ರಸಾದ್ ಪ್ರಾರ್ಥನೆ ನೆರವೇರಿಸಿದರು, ಅಶೋಕ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಜನರು ಜೇನು ಕೃಷಿಯ ಸಮರ್ಪಕ ಮಾಹಿತಿ ಪಡೆದುಕೊಂಡರು.

Related posts

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya
error: Content is protected !!