38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

ಉಜಿರೆ: ಸಂತ ಅಂತೋನಿ ಚರ್ಚ್ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ 5ನೇ ಯೋಜನೆ, ಅಶಕ್ತ ಕುಟುಂಬಕ್ಕೆ ಹೊಸಮನೆ “ಅನುಗ್ರಹ” ಇದರ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮವು ನ.24 ರಂದು ಉಜಿರೆ ನೆಲ್ಲಿಪದವು ನಲ್ಲಿ ನಡೆಯಿತು.

ಉಜಿರೆ ಸಂತ ಅಂತೋನಿ ಚರ್ಚ್ ಇದರ ಧರ್ಮ ಗುರುಗಳಾದ ವಂದನೀಯ ಅಬೆಲ್ ಲೋಬೋ ರವರು ಹೊಸ ಮನೆಯ ಆಶೀರ್ವಚನ ಕಾರ್ಯಕ್ರಮ ನೆರವೇರಿಸಿದರು.

ಅತಿಥಿಗಳಾಗಿ ಹ್ಯುಮ್ಯಾನಿಟಿ ಟ್ರಸ್ಟ್ ಬೆಲ್ಮಣ್ ಇದರ ಸ್ಥಾಪಕರಾದ ರೋಶನ್ ಡಿ’ಸೋಜ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್ ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ವಂದನೀಯ ಧರ್ಮಗುರು ವಿಜಯ್ ಲೋಬೋ, ಉಜಿರೆ ಸಂತ ಲಾರೆನ್ಸ್ ವಾಳೆ ಗುರಿಕಾರರು ಶ್ರೀಮತಿ ಮರ್ಲಿನ್ ಡಿ’ಸೋಜ, ಫಲಾನುಭವಿ ರೋಜಿ ಪಾಯ್ಸ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಜಿರೆ ದಯಾಳ್‌ಭಾಗ್ ಆಶ್ರಮದ ಸುಪೀರಿಯ‌ರ್ ವಂದನೀಯ ಧರ್ಮಗುರು ಫೆಡ್ರಿಕ್ ಬ್ರಾಗ್ಸ್, ಲಾಯಿಲ ದಯಾ ಸ್ಪೆಷಲ್ ಸ್ಕೂಲ್ ಇದರ ವಂದನೀಯ ಧರ್ಮಗುರು ವಿನೋದ್ ಮಸ್ಕರೇನಸ್, ಉಜಿರೆ ಎಸ್.ಎಂ. ಐ. ಕಾನ್ವೆಂಟ್ ಇದರ ಸುಪೀರಿಯರ್ ಸಿಸ್ಟರ್ ನ್ಯಾನ್ಸಿ ಡಾಯಸ್, ಎಸ್.ವಿ.ಪಿ. ಉಜಿರೆ ಘಟಕದ ಅಧ್ಯಕ್ಷ ಸೆಬಾಸ್ಟಿಯನ್ ಡಿ’ಸೋಜ, ಉಜಿರೆ ಎಸ್.ಸಿ.ಸಿ ಸಂಚಾಲಕ ರೋಶನ್ ಡಿ’ಸೋಜಾ, ಪಂಚಾಯತ್ ಸದಸ್ಯರು ಹಾಗೂ ಕಟ್ಟಡ ನಿರ್ಮಾಣ ಗುತ್ತಿಗೆದಾರಅನಿಲ್ ಡಿ’ಸೋಜಾ, ಫಲಾನುಭವಿಗಳಾದ ರೋಜಿ ಪಾಯ್ಸ್ ರವರ ಕುಟುಂಬಸ್ಥರು, ದಾನಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಉಜಿರೆ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಪ್ರಸ್ತಾವಿಕವಾಗಿ ಮಾತನಾಡಿದರು. ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಅಗೋರಿ ವಾಸ್, ಪಾಲನಾ ಆಯೋಗ ಸಂಚಾಲಕಿ ಶ್ರೀಮತಿ ಲವೀನಾ ಫೆರ್ನಾಂಡಿಸ್ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya
error: Content is protected !!