September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

ಉಜಿರೆ: ಸಂತ ಅಂತೋನಿ ಚರ್ಚ್ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ 5ನೇ ಯೋಜನೆ, ಅಶಕ್ತ ಕುಟುಂಬಕ್ಕೆ ಹೊಸಮನೆ “ಅನುಗ್ರಹ” ಇದರ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮವು ನ.24 ರಂದು ಉಜಿರೆ ನೆಲ್ಲಿಪದವು ನಲ್ಲಿ ನಡೆಯಿತು.

ಉಜಿರೆ ಸಂತ ಅಂತೋನಿ ಚರ್ಚ್ ಇದರ ಧರ್ಮ ಗುರುಗಳಾದ ವಂದನೀಯ ಅಬೆಲ್ ಲೋಬೋ ರವರು ಹೊಸ ಮನೆಯ ಆಶೀರ್ವಚನ ಕಾರ್ಯಕ್ರಮ ನೆರವೇರಿಸಿದರು.

ಅತಿಥಿಗಳಾಗಿ ಹ್ಯುಮ್ಯಾನಿಟಿ ಟ್ರಸ್ಟ್ ಬೆಲ್ಮಣ್ ಇದರ ಸ್ಥಾಪಕರಾದ ರೋಶನ್ ಡಿ’ಸೋಜ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್ ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ವಂದನೀಯ ಧರ್ಮಗುರು ವಿಜಯ್ ಲೋಬೋ, ಉಜಿರೆ ಸಂತ ಲಾರೆನ್ಸ್ ವಾಳೆ ಗುರಿಕಾರರು ಶ್ರೀಮತಿ ಮರ್ಲಿನ್ ಡಿ’ಸೋಜ, ಫಲಾನುಭವಿ ರೋಜಿ ಪಾಯ್ಸ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಜಿರೆ ದಯಾಳ್‌ಭಾಗ್ ಆಶ್ರಮದ ಸುಪೀರಿಯ‌ರ್ ವಂದನೀಯ ಧರ್ಮಗುರು ಫೆಡ್ರಿಕ್ ಬ್ರಾಗ್ಸ್, ಲಾಯಿಲ ದಯಾ ಸ್ಪೆಷಲ್ ಸ್ಕೂಲ್ ಇದರ ವಂದನೀಯ ಧರ್ಮಗುರು ವಿನೋದ್ ಮಸ್ಕರೇನಸ್, ಉಜಿರೆ ಎಸ್.ಎಂ. ಐ. ಕಾನ್ವೆಂಟ್ ಇದರ ಸುಪೀರಿಯರ್ ಸಿಸ್ಟರ್ ನ್ಯಾನ್ಸಿ ಡಾಯಸ್, ಎಸ್.ವಿ.ಪಿ. ಉಜಿರೆ ಘಟಕದ ಅಧ್ಯಕ್ಷ ಸೆಬಾಸ್ಟಿಯನ್ ಡಿ’ಸೋಜ, ಉಜಿರೆ ಎಸ್.ಸಿ.ಸಿ ಸಂಚಾಲಕ ರೋಶನ್ ಡಿ’ಸೋಜಾ, ಪಂಚಾಯತ್ ಸದಸ್ಯರು ಹಾಗೂ ಕಟ್ಟಡ ನಿರ್ಮಾಣ ಗುತ್ತಿಗೆದಾರಅನಿಲ್ ಡಿ’ಸೋಜಾ, ಫಲಾನುಭವಿಗಳಾದ ರೋಜಿ ಪಾಯ್ಸ್ ರವರ ಕುಟುಂಬಸ್ಥರು, ದಾನಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಉಜಿರೆ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಪ್ರಸ್ತಾವಿಕವಾಗಿ ಮಾತನಾಡಿದರು. ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಅಗೋರಿ ವಾಸ್, ಪಾಲನಾ ಆಯೋಗ ಸಂಚಾಲಕಿ ಶ್ರೀಮತಿ ಲವೀನಾ ಫೆರ್ನಾಂಡಿಸ್ ನಿರೂಪಿಸಿ ಧನ್ಯವಾದವಿತ್ತರು.

Related posts

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya
error: Content is protected !!