July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

ಬೆಳ್ತಂಗಡಿ: ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನ.25 ರಂದು ಬೆಳ್ತಂಗಡಿ ವಿಘ್ನೇಶ್ ಕಾಂಪ್ಲೆಕ್ಸ್, 2ನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ನೂತನ ಶಾಖೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡ್ವೆಟ್ನಾಯ ಉದ್ಘಾಟಿಸಿ ಶುಭಹಾರೈಸಿದರು.

ನಂತರ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಭದ್ರತಾ ಕೊಠಡಿಯನ್ನು ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ನೆರವೇರಿಸಿದರು.



ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರು ಶ್ರೀನಿವಾಸ ಗೌಡ, ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಡಿ’ಸೋಜ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಧ್ಯಕ್ಷರು, ನಿರ್ದೇಶಕರು. ಸದಸ್ಯರು, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya
error: Content is protected !!