July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಯತ್ತ ಎನ್ನುವ ಧ್ಯೇಯ ವಾಕ್ಯದೊಂದಿಗೆ ನಗರ ಭಜನಾ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮವನ್ನು ಊರಿನ ಪ್ರಗತಿಪರ ಕೃಷಿಕರು, ಹಿರಿಯರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಆದ ಪ್ರಚಂಡ ಭಾನು ಭಟ್ ಪಾಂಬೇಲು ಉದ್ಘಾಟಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು ಹಾಗೂ ಹಿರಿಯರುಗಳಾದ ಧರ್ಣಪ್ಪ ಗೌಡ, ಡೀಕಯ್ಯ ಪೂಜಾರಿ, ರುಕ್ಮಯ್ಯ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷರ ಹಾಗೂ ಮಹಿಳಾ ತಂಡದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಮಂಡಳಿಯ ಗೌರವ ಸಲಹೆಗಾರ ಪಿ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ , ಭಜನಾ ಮಂಡಳಿಯ ಲೆಕ್ಕಪರಿಶೋಧಕ ಲಿಂಗಪ್ಪ ಗೌಡ ವಂದಿಸಿದರು.

Related posts

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya
error: Content is protected !!