September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

ಬೆಳ್ತಂಗಡಿ : ಎಂಟು ಶತಮಾನಗಳ ಭವ್ಯ ಇತಿಹಾಸ ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ. ಈ ಕ್ಷೇತ್ರದಲ್ಲಿ ನವೆಂಬರ್ 26 ರಿಂದ 30 ರ ವರೆಗೆ ಲಕ್ಷದೀಪೋತ್ಸವವು ನಡೆಯಲಿದೆ.ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮದ ನಿಮಿತ್ತ ನವೆಂಬರ್ 26 ರಂದು ರಾಜ್ಯ ಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಗ್ರಂಥ ಪ್ರದರ್ಶನಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಶ್ರೀ ಡಿ. ವೀರೇಂದ್ರ ಹೆಗ್ಡೆಯವರರಿಂದ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟನೆ ಮಾಡಿದರು.

ಈ ಪ್ರದರ್ಶನದಲ್ಲಿ ಅಧ್ಯಾತ್ಮ, ಹಬ್ಬಗಳ ಆಚರಣೆಯ ಶಾಸ್ತ್ರ, ಹಿಂದೂ ಧರ್ಮದಲ್ಲಿ ಹೇಳಿದ ಜೀವನ ಶೈಲಿಯ ಶಾಸ್ತ್ರ ಈ ರೀತಿ ಮಾನವ ಕುಲಕ್ಕೆ ಉಪಯುಕ್ತ ಅಮೂಲ್ಯ ಗ್ರಂಥ ಸಂಪತ್ತು ಇದೆ, ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರಿಗೂ ಈ ಗ್ರಂಥಗಳಲ್ಲಿನ ಜ್ಞಾನ ಅತ್ಯಾವಶ್ಯಕ ಆಗಿವೆ. ಅಷ್ಟೆ ಅಲ್ಲದೆ ಈ ಪ್ರದರ್ಶನದಲ್ಲಿ ಸುಗಂಧ ಭರಿತ ವಿವಿಧ ಊದುಬತ್ತಿಗಳು, ಸುಗಂಧಭರಿತ ಸಾಬೂನು, ಉಟನೆ, ಶುದ್ಧ ಅರಿಷಿಣದಿಂದ ತಯಾರಿಸಿದ ಕುಂಕುಮ, ದೇವತೆಗಳ ಸಾತ್ವಿಕ ಭಾವ ಚಿತ್ರಗಳು, ಪಂಚಾಂಗ, ಸೇರಿದಂತೆ ಅನೇಕ ಉತ್ಪಾದನೆಗಳು ಲಭ್ಯವಿದ್ದು ಭಕ್ತರು ತಪ್ಪದೆ ಇಲ್ಲಿ ಭೇಟಿ ನೀಡಬೇಕೆಂದು ಸನಾತನ ಸಂಸ್ಥೆ ಕರೆ ನೀಡಿದೆ. ಈ ಪ್ರದರ್ಶನವು 55ನೆಯ ಮಳಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ , ಉಜಿರೆಯಲ್ಲಿ 26 ರಿಂದ 30 ಡಿಸೆಂಬರ್ ವರೆಗೆ ಎಲ್ಲರಿಗಾಗಿ ಉಪಲಬ್ಧವಿದೆ ಎಂದು ಸನಾತನ ಸಂಸ್ಥೆ ರಾಜ್ಯ ವಕ್ತಾರರು ವಿನೋದ ಕಾಮತ್ ತಿಳಿಸಿದರು.


Related posts

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ಶಿರ್ಲಾಲು: ಪೆರಾಲ್ಡಡಿ ತಡೆಗೋಡೆ ಕುಸಿತ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya
error: Content is protected !!