September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

ಬೆಳ್ತಂಗಡಿ : ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಇಂದು(ನ.26) 75ನೇ ಸಂವಿಧಾನ ದಿನಾಚರಣೆಯನ್ನುವಕೀಲರ ಭವನದಲ್ಲಿ ಆಚರಿಸಲಾಯಿತು.


ಕಾರ್ಯಕ್ರಮವನ್ನು ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಬಿ.ಕೆ ಭಾರತ ಸಂವಿಧಾನದ ಪುಸ್ತಕ ಹಾಗೂ ಡಾ ಬಿ ಆರ್ ಅಂಬೇಡ್ಕರ್ ರವರಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಉದ್ಘಾಟಿಸಿ ಸಂವಿಧಾನದ ಪೀಠಿಕೆ ಯನ್ನು ನೆರೆದಿದ್ದ ಎಲ್ಲ ವಕೀಲರಿಗೆ ಬೋಧಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಇವರು ಸಂವಿಧಾನದ ಮಹತ್ವ ಹಾಗೂ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಬೆಳಕು ಚೆಲ್ಲಿದರು.

ವೇದಿಕೆಯಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಹಾಗೂ ಯುವ ವಕೀಲರ ವೇದಿಕೆಯ ಅಧ್ಯಕ್ಷ ಸಂದೀಪ್ ಡಿಸೋಜ ಉಪಸ್ಥಿತರಿದ್ದರು. ಬೆಳ್ತಂಗಡಿ ವಕೀಲರ ಹಿರಿಯ ಸಮಿತಿ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸಂವಿಧಾನದ ತಿದ್ದುಪಡಿಗಳ ಬಗ್ಗೆ ಮತ್ತು ಸಂವಿಧಾನದ ವಾಸ್ತವಿಕತೆಯ ಬಗ್ಗೆ ವಿವರಿಸಿದ್ದರು.


ಕಾರ್ಯಕ್ರಮದಲ್ಲಿ ಯುವ ವಕೀಲರಿಗೆ ಆಯೋಜಿಸಲಾಗಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಿಸಲಾಯಿತು. ರಸಪ್ರಶ್ನೆಯ ವಿಜೇತರ ಪಟ್ಟಿಯನ್ನು ಯುವ ವೇದಿಕೆ ಕಾರ್ಯದರ್ಶಿ ಶ್ರೀಮತಿ ಜೋಶ್ನಾ ವೆಲೋನ ಕೊರೆಯ ವಾಚಿಸಿದರು.

ಈ ಕಾರ್ಯಕ್ರಮದಲ್ಲಿ ಯುವ ವಕೀಲರಾದ ಜೋಬಿ ಜೋಯ್ ಸ್ವಾಗತಿಸಿ, ಶ್ವೇತಾ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಹರ್ಷಿತ್ ಹೆಚ್ ನೆರವೇರಿಸಿದರು.

Related posts

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!