July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಯುವ ವಕೀಲರಿಗೆ ರಸಪ್ರಶ್ನೆ ಕಾರ್ಯಕ್ರಮವು ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಬಹಳ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಭಾಗವಹಿಸಿದ ಸ್ಪರ್ಧಿಗಳಿಗೆ ಸ್ವತಃ ಬಹುಮಾನವನ್ನು ವಕೀಲರ ಸಂಘದ ಸದಸ್ಯ ಕೃಷ್ಣ ಶೆಣೈ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ , ಹಿರಿಯ ನ್ಯಾಯವಾದಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ವೈ ರಾಧಾಕೃಷ್ಣ, ಶ್ರೀಮತಿ ಸ್ವರ್ಣ ಲತಾ ಎ, ಕೋಶಾಧಿಕಾರಿಯಾದ ಪ್ರಶಾಂತ್ ಎಂ ಹಾಗೂ ಮನೋಹರ್ ಕುಮಾರ್ ಎ ವಕೀಲರು, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ , ಶ್ರೀಮತಿ ವೀಕ್ಷಿತಾ , ಶ್ರೀಮತಿ ಉಷಾ ಎನ್ ಜಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯುವ ವಕೀಲರ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜೋಸ್ನಾ ವೆಲೋನ ಕೊರೆಯ ಸ್ವಾಗತಿಸಿ, ವಕೀಲರ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಧನ್ಯವಾದ ಸಮರ್ಪಿಸಿದರು.

Related posts

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya
error: Content is protected !!