23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಯುವ ವಕೀಲರಿಗೆ ರಸಪ್ರಶ್ನೆ ಕಾರ್ಯಕ್ರಮವು ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಬಹಳ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಭಾಗವಹಿಸಿದ ಸ್ಪರ್ಧಿಗಳಿಗೆ ಸ್ವತಃ ಬಹುಮಾನವನ್ನು ವಕೀಲರ ಸಂಘದ ಸದಸ್ಯ ಕೃಷ್ಣ ಶೆಣೈ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ , ಹಿರಿಯ ನ್ಯಾಯವಾದಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ವೈ ರಾಧಾಕೃಷ್ಣ, ಶ್ರೀಮತಿ ಸ್ವರ್ಣ ಲತಾ ಎ, ಕೋಶಾಧಿಕಾರಿಯಾದ ಪ್ರಶಾಂತ್ ಎಂ ಹಾಗೂ ಮನೋಹರ್ ಕುಮಾರ್ ಎ ವಕೀಲರು, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ , ಶ್ರೀಮತಿ ವೀಕ್ಷಿತಾ , ಶ್ರೀಮತಿ ಉಷಾ ಎನ್ ಜಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯುವ ವಕೀಲರ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜೋಸ್ನಾ ವೆಲೋನ ಕೊರೆಯ ಸ್ವಾಗತಿಸಿ, ವಕೀಲರ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಧನ್ಯವಾದ ಸಮರ್ಪಿಸಿದರು.

Related posts

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!