22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

ಬೆಳ್ತಂಗಡಿ : ಎಂಟು ಶತಮಾನಗಳ ಭವ್ಯ ಇತಿಹಾಸ ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ. ಈ ಕ್ಷೇತ್ರದಲ್ಲಿ ನವೆಂಬರ್ 26 ರಿಂದ 30 ರ ವರೆಗೆ ಲಕ್ಷದೀಪೋತ್ಸವವು ನಡೆಯಲಿದೆ.ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮದ ನಿಮಿತ್ತ ನವೆಂಬರ್ 26 ರಂದು ರಾಜ್ಯ ಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಗ್ರಂಥ ಪ್ರದರ್ಶನಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಶ್ರೀ ಡಿ. ವೀರೇಂದ್ರ ಹೆಗ್ಡೆಯವರರಿಂದ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟನೆ ಮಾಡಿದರು.

ಈ ಪ್ರದರ್ಶನದಲ್ಲಿ ಅಧ್ಯಾತ್ಮ, ಹಬ್ಬಗಳ ಆಚರಣೆಯ ಶಾಸ್ತ್ರ, ಹಿಂದೂ ಧರ್ಮದಲ್ಲಿ ಹೇಳಿದ ಜೀವನ ಶೈಲಿಯ ಶಾಸ್ತ್ರ ಈ ರೀತಿ ಮಾನವ ಕುಲಕ್ಕೆ ಉಪಯುಕ್ತ ಅಮೂಲ್ಯ ಗ್ರಂಥ ಸಂಪತ್ತು ಇದೆ, ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರಿಗೂ ಈ ಗ್ರಂಥಗಳಲ್ಲಿನ ಜ್ಞಾನ ಅತ್ಯಾವಶ್ಯಕ ಆಗಿವೆ. ಅಷ್ಟೆ ಅಲ್ಲದೆ ಈ ಪ್ರದರ್ಶನದಲ್ಲಿ ಸುಗಂಧ ಭರಿತ ವಿವಿಧ ಊದುಬತ್ತಿಗಳು, ಸುಗಂಧಭರಿತ ಸಾಬೂನು, ಉಟನೆ, ಶುದ್ಧ ಅರಿಷಿಣದಿಂದ ತಯಾರಿಸಿದ ಕುಂಕುಮ, ದೇವತೆಗಳ ಸಾತ್ವಿಕ ಭಾವ ಚಿತ್ರಗಳು, ಪಂಚಾಂಗ, ಸೇರಿದಂತೆ ಅನೇಕ ಉತ್ಪಾದನೆಗಳು ಲಭ್ಯವಿದ್ದು ಭಕ್ತರು ತಪ್ಪದೆ ಇಲ್ಲಿ ಭೇಟಿ ನೀಡಬೇಕೆಂದು ಸನಾತನ ಸಂಸ್ಥೆ ಕರೆ ನೀಡಿದೆ. ಈ ಪ್ರದರ್ಶನವು 55ನೆಯ ಮಳಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ , ಉಜಿರೆಯಲ್ಲಿ 26 ರಿಂದ 30 ಡಿಸೆಂಬರ್ ವರೆಗೆ ಎಲ್ಲರಿಗಾಗಿ ಉಪಲಬ್ಧವಿದೆ ಎಂದು ಸನಾತನ ಸಂಸ್ಥೆ ರಾಜ್ಯ ವಕ್ತಾರರು ವಿನೋದ ಕಾಮತ್ ತಿಳಿಸಿದರು.


Related posts

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!