September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

ಬೆಳ್ತಂಗಡಿ : ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಇಂದು(ನ.26) 75ನೇ ಸಂವಿಧಾನ ದಿನಾಚರಣೆಯನ್ನುವಕೀಲರ ಭವನದಲ್ಲಿ ಆಚರಿಸಲಾಯಿತು.


ಕಾರ್ಯಕ್ರಮವನ್ನು ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಬಿ.ಕೆ ಭಾರತ ಸಂವಿಧಾನದ ಪುಸ್ತಕ ಹಾಗೂ ಡಾ ಬಿ ಆರ್ ಅಂಬೇಡ್ಕರ್ ರವರಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಉದ್ಘಾಟಿಸಿ ಸಂವಿಧಾನದ ಪೀಠಿಕೆ ಯನ್ನು ನೆರೆದಿದ್ದ ಎಲ್ಲ ವಕೀಲರಿಗೆ ಬೋಧಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಇವರು ಸಂವಿಧಾನದ ಮಹತ್ವ ಹಾಗೂ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಬೆಳಕು ಚೆಲ್ಲಿದರು.

ವೇದಿಕೆಯಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಹಾಗೂ ಯುವ ವಕೀಲರ ವೇದಿಕೆಯ ಅಧ್ಯಕ್ಷ ಸಂದೀಪ್ ಡಿಸೋಜ ಉಪಸ್ಥಿತರಿದ್ದರು. ಬೆಳ್ತಂಗಡಿ ವಕೀಲರ ಹಿರಿಯ ಸಮಿತಿ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸಂವಿಧಾನದ ತಿದ್ದುಪಡಿಗಳ ಬಗ್ಗೆ ಮತ್ತು ಸಂವಿಧಾನದ ವಾಸ್ತವಿಕತೆಯ ಬಗ್ಗೆ ವಿವರಿಸಿದ್ದರು.


ಕಾರ್ಯಕ್ರಮದಲ್ಲಿ ಯುವ ವಕೀಲರಿಗೆ ಆಯೋಜಿಸಲಾಗಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಿಸಲಾಯಿತು. ರಸಪ್ರಶ್ನೆಯ ವಿಜೇತರ ಪಟ್ಟಿಯನ್ನು ಯುವ ವೇದಿಕೆ ಕಾರ್ಯದರ್ಶಿ ಶ್ರೀಮತಿ ಜೋಶ್ನಾ ವೆಲೋನ ಕೊರೆಯ ವಾಚಿಸಿದರು.

ಈ ಕಾರ್ಯಕ್ರಮದಲ್ಲಿ ಯುವ ವಕೀಲರಾದ ಜೋಬಿ ಜೋಯ್ ಸ್ವಾಗತಿಸಿ, ಶ್ವೇತಾ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಹರ್ಷಿತ್ ಹೆಚ್ ನೆರವೇರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!