25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಯುವ ವಕೀಲರಿಗೆ ರಸಪ್ರಶ್ನೆ ಕಾರ್ಯಕ್ರಮವು ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಬಹಳ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಭಾಗವಹಿಸಿದ ಸ್ಪರ್ಧಿಗಳಿಗೆ ಸ್ವತಃ ಬಹುಮಾನವನ್ನು ವಕೀಲರ ಸಂಘದ ಸದಸ್ಯ ಕೃಷ್ಣ ಶೆಣೈ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ , ಹಿರಿಯ ನ್ಯಾಯವಾದಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ವೈ ರಾಧಾಕೃಷ್ಣ, ಶ್ರೀಮತಿ ಸ್ವರ್ಣ ಲತಾ ಎ, ಕೋಶಾಧಿಕಾರಿಯಾದ ಪ್ರಶಾಂತ್ ಎಂ ಹಾಗೂ ಮನೋಹರ್ ಕುಮಾರ್ ಎ ವಕೀಲರು, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ , ಶ್ರೀಮತಿ ವೀಕ್ಷಿತಾ , ಶ್ರೀಮತಿ ಉಷಾ ಎನ್ ಜಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯುವ ವಕೀಲರ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜೋಸ್ನಾ ವೆಲೋನ ಕೊರೆಯ ಸ್ವಾಗತಿಸಿ, ವಕೀಲರ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಧನ್ಯವಾದ ಸಮರ್ಪಿಸಿದರು.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya
error: Content is protected !!