September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ, ಧರ್ಮಸ್ಥಳ ಇದರ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನ. 25 ರಂದು ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಹಂತ್ ವಿದ್ಯಾನಂದ ಸರಸ್ವತಿ ಮಹಾರಾಜ್, ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಆನಂದ ಚೈತನ್ಯ ಸರಸ್ವತಿ ಮಹಾರಾಜ್, ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ರಾಮೇಶ್ವರಾನಂದ ಸರಸ್ವತಿ ಮಹಾರಾಜ್, ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಶಿವ ಪ್ರೇಮಾನಂದಪುರಿ ಮಹಾರಾಜ್, ಮಹಾಮಂಡಲೇಶ್ವರ್ 1008 ಶ್ರೀ ಸ್ವಾಮಿ ಲಲಿತಾನಂದ ಗಿರಿ ಮಹಾರಾಜ್, ಶ್ರೀ ಮಹಂತ್ ದೇವಾನಂದ ಸರಸ್ಕೃತಿ ಮಹಾರಾಜ್, ಶ್ರೀ ಮಹಂತ್ ಇಂದ್ರಾನಂದ ಸರಸ್ವತಿ, ಮಹಂತ್ ಮಾಧವಾನಂದ ಸರಸ್ಕೃತಿ, ಮಹಂತ್ ಜ್ಞಾನಪ್ರೇಮಾನಂದ ಪುರಿ ಮಹಾರಾಜ್, ಕರ್ನಾಟಕ ಸರಕಾರದ ಮೀನುಗಾರಿಕೆ ಸಚಿವ ಮಂಕಾಳ್ ಎಸ್. ವೈದ್ಯ, ಹರಿದ್ವಾರ ಶಾಸಕ ಮದನ್ ಕೌಶಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರು ಕಾರ್ಪೋರೇಟರ್ ಕಿರಣ್ ಕುಮಾರ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಪಿ. ಕೆ. ರಾಜು ಪೂಜಾರಿ ಕಾಶಿಪಟ್ನ, ಬೆಯರಿನ್ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್, ಭಟ್ಕಳದ ಕೃಷ್ಣ ನಾಯ್ಕ, ಗೋವಿಂದ ನಾಯ್, ಈಶ್ವರ ನಾಯ್, ಗಣೇಶ್ ನೇತ್ರಾಣಿ, ಗಂಗಾಧರ್ ಬೆಂಗಳೂರು, ರಮೇಶ್ ಸಾಲಿಯಾನ್ ದೆಹಲಿ, ಜೀತೇಶ್ ಉಡುಪಿ, ಮಠದ ಟ್ರಷ್ಟಿ ತುಕಾರಾಮ ಸಾಲಿಯಾನ್, ರವೀಂದ್ರ ಪೂಜಾರಿ ಆರ್ಲ ಮೊದಲಾದವರು ಹಾಜರಿದ್ದರು. ಬಳಿಕ ಸ್ವಾಮಿಜಿಯವರ ನೇತೃತ್ವದಲ್ಲಿ ಪವಿತ್ರ ಗಂಗಾ ನದಿಯಲ್ಲಿ ಗಂಗಾ ಸ್ನಾನ, ಗಂಗಾ ಆರತಿ ನಡೆಯಿತು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಶವ ಹೂತು ಹಾಕಿದ ದೂರು ಪ್ರಕರಣ: ಎಸ್ ಐಟಿ ರಚನೆಗೆ ಮುಖ್ಯ ಮಂತ್ರಿಗಳಿಗೆ ಮನವಿ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya
error: Content is protected !!