September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

ಬೆಳ್ತಂಗಡಿ : ಎಂಟು ಶತಮಾನಗಳ ಭವ್ಯ ಇತಿಹಾಸ ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ. ಈ ಕ್ಷೇತ್ರದಲ್ಲಿ ನವೆಂಬರ್ 26 ರಿಂದ 30 ರ ವರೆಗೆ ಲಕ್ಷದೀಪೋತ್ಸವವು ನಡೆಯಲಿದೆ.ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮದ ನಿಮಿತ್ತ ನವೆಂಬರ್ 26 ರಂದು ರಾಜ್ಯ ಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಗ್ರಂಥ ಪ್ರದರ್ಶನಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಶ್ರೀ ಡಿ. ವೀರೇಂದ್ರ ಹೆಗ್ಡೆಯವರರಿಂದ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟನೆ ಮಾಡಿದರು.

ಈ ಪ್ರದರ್ಶನದಲ್ಲಿ ಅಧ್ಯಾತ್ಮ, ಹಬ್ಬಗಳ ಆಚರಣೆಯ ಶಾಸ್ತ್ರ, ಹಿಂದೂ ಧರ್ಮದಲ್ಲಿ ಹೇಳಿದ ಜೀವನ ಶೈಲಿಯ ಶಾಸ್ತ್ರ ಈ ರೀತಿ ಮಾನವ ಕುಲಕ್ಕೆ ಉಪಯುಕ್ತ ಅಮೂಲ್ಯ ಗ್ರಂಥ ಸಂಪತ್ತು ಇದೆ, ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರಿಗೂ ಈ ಗ್ರಂಥಗಳಲ್ಲಿನ ಜ್ಞಾನ ಅತ್ಯಾವಶ್ಯಕ ಆಗಿವೆ. ಅಷ್ಟೆ ಅಲ್ಲದೆ ಈ ಪ್ರದರ್ಶನದಲ್ಲಿ ಸುಗಂಧ ಭರಿತ ವಿವಿಧ ಊದುಬತ್ತಿಗಳು, ಸುಗಂಧಭರಿತ ಸಾಬೂನು, ಉಟನೆ, ಶುದ್ಧ ಅರಿಷಿಣದಿಂದ ತಯಾರಿಸಿದ ಕುಂಕುಮ, ದೇವತೆಗಳ ಸಾತ್ವಿಕ ಭಾವ ಚಿತ್ರಗಳು, ಪಂಚಾಂಗ, ಸೇರಿದಂತೆ ಅನೇಕ ಉತ್ಪಾದನೆಗಳು ಲಭ್ಯವಿದ್ದು ಭಕ್ತರು ತಪ್ಪದೆ ಇಲ್ಲಿ ಭೇಟಿ ನೀಡಬೇಕೆಂದು ಸನಾತನ ಸಂಸ್ಥೆ ಕರೆ ನೀಡಿದೆ. ಈ ಪ್ರದರ್ಶನವು 55ನೆಯ ಮಳಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ , ಉಜಿರೆಯಲ್ಲಿ 26 ರಿಂದ 30 ಡಿಸೆಂಬರ್ ವರೆಗೆ ಎಲ್ಲರಿಗಾಗಿ ಉಪಲಬ್ಧವಿದೆ ಎಂದು ಸನಾತನ ಸಂಸ್ಥೆ ರಾಜ್ಯ ವಕ್ತಾರರು ವಿನೋದ ಕಾಮತ್ ತಿಳಿಸಿದರು.


Related posts

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya
error: Content is protected !!