July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

ಬೆಳ್ತಂಗಡಿ :ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಾಮಾನ್ಯ ಸಭೆಯು ಬೆಳ್ತಂಗಡಿಯ ಸಿವಿಸಿ ಸಭಾಂಗಣದಲ್ಲಿ ತಾಲೂಕು ಕಬ್ಬಡಿ ಅಮೆಚೂರು ಸಂಸ್ಥೆಯ ಅಧ್ಯಕ್ಷರಾದ ರಂಜನ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ, ಕಾರ್ಯಧ್ಯಕ್ಷರಾದ ರಾಜಶೇಖರ್ ಶೆಟ್ಟಿ,ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರಾನ್ಸಿಸ್ ವಿ ವಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಕೀಮ್, ಉಪಾಧ್ಯಕ್ಷರಾದ ನಾಮದೇವ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ತೀರ್ಪುಗಾರ ಮಂಡಲ ಸಂಚಾಲಕರು ಹಾಗೂ ತಾಲೂಕು ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಪ್ರಭಾಕರ್ ನಾರಾವಿ, ತಾಲೂಕು ನೌಕರ ಸಂಘದ ಅಧ್ಯಕ್ಷ ಜಯರಾಜ ಜೈನ್, ತಾಲೂಕು ಉಪಾಧ್ಯಕ್ಷರಾದ ವಿಜಯ ಗೌಡ ಸಂಸ್ಥೆಯ ಎಲ್ಲಾ ಸರ್ವ ಸದಸ್ಯರು ಭಾಗವಹಿಸಿರುತ್ತಾರೆ. ಸಭೆಯಲ್ಲಿ ಲೆಕ್ಕಪತ್ರ ಮಂಡಲ ಮಾಡಲಾಯಿತು. ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರಾದ ಹರೀಶ್ ಪೂಂಜರವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಬಡ್ಡಿ ಸಂಘಟನೆ ಬಗ್ಗೆ ಮತ್ತು ತಾಲೂಕು ಕಬ್ಬಡಿ ಚಾಂಪಿಯನ್ ಶಿಪ್ ಬಗ್ಗೆ ಚರ್ಚಿಸಲಾಯಿತು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ವಂದಿಸಿದರು.

Related posts

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya
error: Content is protected !!