September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಬೆಂಗಳೂರು ವತಿಯಿಂದ ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ನ. 27 ರಂದು ಪ್ರಾರಂಭಗೊಂಡಿತು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತ್ ಬಿಲ್ ಕಲೇಕ್ಟರ್, ಕ್ಲರ್ಕ್ / ಕ್ಲರ್ಕ್ ಕಮ್ ಡಿಇಓ, ಡಾಟ ಎಂಟ್ರಿ ಅಪರೇಟರ್ ಹುದ್ದೆಗಳನ್ನು ಸಿ ಗ್ರೇಡ್‌ಗೆ, ವಾಟರ್ ಮ್ಯಾನ್, ಶುಚಿತ್ವ ನೌಕರ, ಅಟೆಂಡರ್ ಹುದ್ದೆಗಳನ್ನು ಡಿ ಗ್ರೇಡ್‌ಗೆ ಮೇಲ್ದರ್ಜೆಗೇರಿಸಿ, ಸಿ ಮತ್ತು ಡಿ ಗ್ರೇಡ್ ವೇತನ ಶ್ರೇಣಿ ನಿಗಧಿಪಡಿಸಿ, ಸಿ ಮತ್ತು ಡಿ ದರ್ಜೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್ ನೌಕರರು ಭಾಗಿಯಾದರು.

Related posts

ಬೆಳ್ತಂಗಡಿ: ಭಜನಾ ಪರಿಷತ್ತಿನ ಸಮಾಲೋಚನಾ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya
error: Content is protected !!