24 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

ಬೆಳ್ತಂಗಡಿ :ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಾಮಾನ್ಯ ಸಭೆಯು ಬೆಳ್ತಂಗಡಿಯ ಸಿವಿಸಿ ಸಭಾಂಗಣದಲ್ಲಿ ತಾಲೂಕು ಕಬ್ಬಡಿ ಅಮೆಚೂರು ಸಂಸ್ಥೆಯ ಅಧ್ಯಕ್ಷರಾದ ರಂಜನ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ, ಕಾರ್ಯಧ್ಯಕ್ಷರಾದ ರಾಜಶೇಖರ್ ಶೆಟ್ಟಿ,ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರಾನ್ಸಿಸ್ ವಿ ವಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಕೀಮ್, ಉಪಾಧ್ಯಕ್ಷರಾದ ನಾಮದೇವ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ತೀರ್ಪುಗಾರ ಮಂಡಲ ಸಂಚಾಲಕರು ಹಾಗೂ ತಾಲೂಕು ತೀರ್ಪುಗಾರರ ಮಂಡಳಿಯ ಅಧ್ಯಕ್ಷ ಪ್ರಭಾಕರ್ ನಾರಾವಿ, ತಾಲೂಕು ನೌಕರ ಸಂಘದ ಅಧ್ಯಕ್ಷ ಜಯರಾಜ ಜೈನ್, ತಾಲೂಕು ಉಪಾಧ್ಯಕ್ಷರಾದ ವಿಜಯ ಗೌಡ ಸಂಸ್ಥೆಯ ಎಲ್ಲಾ ಸರ್ವ ಸದಸ್ಯರು ಭಾಗವಹಿಸಿರುತ್ತಾರೆ. ಸಭೆಯಲ್ಲಿ ಲೆಕ್ಕಪತ್ರ ಮಂಡಲ ಮಾಡಲಾಯಿತು. ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರಾದ ಹರೀಶ್ ಪೂಂಜರವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಕಬಡ್ಡಿ ಸಂಘಟನೆ ಬಗ್ಗೆ ಮತ್ತು ತಾಲೂಕು ಕಬ್ಬಡಿ ಚಾಂಪಿಯನ್ ಶಿಪ್ ಬಗ್ಗೆ ಚರ್ಚಿಸಲಾಯಿತು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ವಂದಿಸಿದರು.

Related posts

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!