July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

ಉಪ್ಪಿನಂಗಡಿ: ಉಪ್ಪಿನಂಗಡಿ ಬೋರ್ಡ್ ಹೈಸ್ಕೂಲ್ 1957ರಲ್ಲಿ ಸ್ಥಾಪನೆಯಾಗಿದ್ದು ಈಗ ಪದವಿ ಪೂರ್ವ ವಿಭಾಗವನ್ನು ಹೊಂದಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಶೈಕ್ಷಣಿಕ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಮಿಂಚಿದ ಪ್ರತಿಭೆಗಳನ್ನು ಈ ಸಂಸ್ಥೆ ನೀಡಿದೆ. ಸಂಸ್ಥೆಗೆ ಭೂದಾನ ಮಾಡಿದ ಬೆನಗಲ್ ಸಹೋದರರು, ನೇತೃತ್ವ ವಹಿಸಿದ ವೇಣುಗೋಪಾಲ್ ನಾಯಕ್, ವಿದ್ಯಾಭಿಮಾನಿಗಳ ಕೊಡುಗೆಯನ್ನು ಸದಾ ಸ್ಮರಿಸುವ ಅವಶ್ಯಕತೆ ಇದೆಯೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠoದೂರು ತಿಳಿಸಿದರು.ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿ ಶಾಲಾ ಅಭಿವೃದ್ಧಿಗೆ ಶ್ರಮಿಸಿದ್ದು ಮುಂದಕ್ಕೂ ತನ್ನ ಸಹಕಾರವಿದೆ. ಹಿರಿಯ ವಿದ್ಯಾರ್ಥಿ ಸಂಘವು ಸೌಹಾರ್ದತೆಯಿಂದ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಮಾದರಿಯಾಗಿ ಕೀರ್ತಿಯನ್ನು ತರುವಂತಹ ಸಾಧನೆ ಮಾಡಲಿ ಎಂದು ಹಾರೈಸಿದರು.


ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘವನ್ನು ರಚಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಬಲವರ್ಧನಗೊಳಿಸುವ ಆಶಯವನ್ನು ಹೊಂದಿದೆ. ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಆಸ್ತಿಯಾಗಿದ್ದು ಪ್ರತಿವರ್ಷದ ವಿದ್ಯಾರ್ಥಿಗಳನ್ನು ವಾಟ್ಸಪ್ ಗುಂಪುಗಳಲ್ಲಿ ಸೇರಿಸುವ ಮತ್ತು ಸದಸ್ಯತ್ವ ಅಭಿಯಾನದ ಮೂಲಕ ಸಂಸ್ಥೆಯ ಜೊತೆಗಿನ ಸಂಬಂಧವನ್ನು ಹೆಚ್ಚಿಸಬೇಕೆಂದು ನಿವೃತ್ತ ಉಪಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಾಸ್ತವಿಕ ಮಾತುಗಳಲ್ಲಿ ತಿಳಿಸಿದರು.

ಸಭೆಯಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷೆ ಗುಣವತಿ, ಸದಸ್ಯರಾದ ಜೆ.ಕೆ ಪೂಜಾರಿ, ಜಯಂತಿ, ಅಬ್ದುಲ್ ಮಜೀದ್, ಅಬೂಬಕ್ಕರ್ ಸಿದ್ದಿಕ್, ಅಬ್ದುಲ್ ರಶೀದ್ ಮಠ, ಖಲಂದರ್ ಶಾಫಿ, ಸಾಮಾಜಿಕ ಮುಂದಾಳು ಎನ್.ಉಮೇಶ ಶೆಣೈ ರಾಮನಗರ, ರೋಟರಿ ಅಧ್ಯಕ್ಷ ನವೀನ್ ಬ್ರ್ಯಾಗ್ಸ್, ಝಕಾರಿಯ ಕೋಡಿಪ್ಪಾಡಿ, ಚಂದ್ರಶೇಖರ ಮಡಿವಾಳ, ಅಬೂಬಕ್ಕರ್ ಸಿದ್ದೀಕ್ ಹ್ಯಾಪಿ ಟೈಮ್ಸ್, ರಘುರಾಮ, ರಾಜೇಶ್ ರಾಮನಗರ ಮೊದಲಾದ ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.ಸರ್ವಾನುಮತದಿಂದ ಹಿರಿಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪ ಪ್ರಾಂಶುಪಾಲರಾದ ದೇವಕಿ. ಡಿ ಸ್ವಾಗತಿಸಿ, ಹಿರಿಯ ಶಿಕ್ಷಕಿ ಪೂರ್ಣಿಮಾ ನಾಯಕ್ ವಂದಿಸಿದರು. ಶಿಕ್ಷಕ ಲಕ್ಷ್ಮೀಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!