22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು ಮೂಲದ ಲಾರೆನ್ಸ್ ಎಂದು ತಿಳಿದು ಬಂದಿದೆ.

ವೇಣೂರು ಪ್ರದೇಶದಲ್ಲಿ ಚರ್ಚಿನ ಸಾಂತ್ ಮಾರಿ ಹಬ್ಬವಿದ್ದ ಕಾರಣ ನಡ್ತಿಕಲ್ಲು ವಾಲ್ಟರ್ ಮೊಂತೇರು ಅವರ ಮನೆಗೆ ನೆಂಟರಾಗಿ ಬಂದಿದ್ದರು. ಹಬ್ಬ ಆಚರಿಸುತ್ತ ಮೂವರು ಜೊತೆಯಾಗಿ ಪಕ್ಕದಲ್ಲಿರುವ ಬರ್ಕಜೆ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸುದ್ದಿ ತಿಳಿಯುತ್ತಿದ್ದಂತೆ ಊರಿನವರು,ಸಂಭಂದಿಕರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

ವೇಣೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya
error: Content is protected !!